ಬಿಜೆಪಿ ಸಹ ಪ್ರಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಖುದ್ದಾಗಿ ಹಲವು ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಸಂಸದರಾದ ಪ್ರಹ್ಲಾದ ಜೋಶಿ, ಶ್ರೀರಾಮುಲು, ಜಿ.ಎಂ. ಸಿದ್ದೇಶ್ವರ, ಶೋಭಾ ಕರಂದ್ಲಾಜೆ, ಶಾಸಕರಾದ ಜಗದೀಶ ಶೆಟ್ಟರ್, ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಿದ್ದರು.