ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ,‘ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಗಿನೆಲೆ ಪ್ರಾಧಿಕಾರ ಸ್ಥಾಪಿಸಲಾಯಿತು. ಹೊಸದುರ್ಗದಲ್ಲಿ 38 ಅಡಿ ಎತ್ತರದ ಕನಕದಾಸರಏಕಶಿಲಾ ಪುತ್ಥಳಿ ನಿರ್ಮಾಣವಾಗುತ್ತಿದೆ. ನಂದಗುಡಿಯಲ್ಲಿ ಸಂಗೊಳ್ಳಿ ರಾಯಣ್ಣರ ನೆನಪಿನಲ್ಲಿ ಸೈನಿಕ ಶಾಲೆ, ಸಂಗೊಳ್ಳಿಯಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣವಾಗುತ್ತಿದೆ’ ಎಂದು ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.