<p><strong>ಹುಬ್ಬಳ್ಳಿ: </strong>ಕಾರ್ಮಿಕರು ಹಾಗೂ ರೈತರು ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕಾರ್ಮಿಕರು ಹಾಗೂ ರೈತರನ್ನು ಕಡೆಗಣಿಸಿದೆ. ಸೌಲಭ್ಯಗಳನ್ನು ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಕಾರ್ಮಿಕ ಪರವಾಗಿ ಹಲವು ಯೋಜನೆ ಜಾರಿಗೊಳಿಸಿದೆ ಎಂದರು.<br />ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಸರ್ಕಾರವೇ ನೇರ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿಮಾಡಲಾಗಿದೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದರು.</p>.<p>ರಾಜ್ಯ ಕಾರ್ಮಿಕ ಮಂಡಳಿಯಲ್ಲಿ ಎಂಟು ಸಾವಿರ ಕೋಟಿ ಹಣವಿದೆ. ಕಾರ್ಮಿಕರು ಸದಸ್ಯತ್ವ ಪಡೆದ ವಿವಿಧಬಯೋಜನೆಗಳ ಲಾಭ ಪಡೆದುಕೊಳ್ಳಬೇಕು. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸಿಕ್ಕ ಕಾರ್ಮಿಕರನ್ನು ಮಾತನಾಡಿಸಿದಾಗ ಅವರಲ್ಲಿ ಬಹುತೇಕ ಮಂದಿ ಸದಸ್ಯತ್ವ ಪಡೆಯದಿರುವುದು ಗೊತ್ತಾಯಿತು ಎಂದರು.</p>.<p>ಕಾಂಗ್ರೆಸ್ ಒಬಿಸಿ ರಾಜ್ಯ ಘಟಕದ ಅಧ್ಯಕ್ಷ ಎಂ.ಎಸ್. ಮುತ್ತುರಾಜ್, ಕಾರ್ಮಿಕ ಘಟಕದ ಕಾರ್ಯಾಧ್ಯಕ್ಷ ಡಾ. ಮೋಹನ್ ರಾವ್ ನಾಲವಡೆ, ಮುಖಂಡರಾದ ರಾಜು ಹಿರೇವಡೆಯರ, ಶಿವಲಿಂಗಪ್ಪ ಶ್ರೀಂಗಾರಿ, ಮಣಿಕಂಠ ಗುಡಿಹಾಳ, ತಾಜುದ್ದೀನ ಮುನವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕಾರ್ಮಿಕರು ಹಾಗೂ ರೈತರು ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕಾರ್ಮಿಕರು ಹಾಗೂ ರೈತರನ್ನು ಕಡೆಗಣಿಸಿದೆ. ಸೌಲಭ್ಯಗಳನ್ನು ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಕಾರ್ಮಿಕ ಪರವಾಗಿ ಹಲವು ಯೋಜನೆ ಜಾರಿಗೊಳಿಸಿದೆ ಎಂದರು.<br />ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಸರ್ಕಾರವೇ ನೇರ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿಮಾಡಲಾಗಿದೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದರು.</p>.<p>ರಾಜ್ಯ ಕಾರ್ಮಿಕ ಮಂಡಳಿಯಲ್ಲಿ ಎಂಟು ಸಾವಿರ ಕೋಟಿ ಹಣವಿದೆ. ಕಾರ್ಮಿಕರು ಸದಸ್ಯತ್ವ ಪಡೆದ ವಿವಿಧಬಯೋಜನೆಗಳ ಲಾಭ ಪಡೆದುಕೊಳ್ಳಬೇಕು. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸಿಕ್ಕ ಕಾರ್ಮಿಕರನ್ನು ಮಾತನಾಡಿಸಿದಾಗ ಅವರಲ್ಲಿ ಬಹುತೇಕ ಮಂದಿ ಸದಸ್ಯತ್ವ ಪಡೆಯದಿರುವುದು ಗೊತ್ತಾಯಿತು ಎಂದರು.</p>.<p>ಕಾಂಗ್ರೆಸ್ ಒಬಿಸಿ ರಾಜ್ಯ ಘಟಕದ ಅಧ್ಯಕ್ಷ ಎಂ.ಎಸ್. ಮುತ್ತುರಾಜ್, ಕಾರ್ಮಿಕ ಘಟಕದ ಕಾರ್ಯಾಧ್ಯಕ್ಷ ಡಾ. ಮೋಹನ್ ರಾವ್ ನಾಲವಡೆ, ಮುಖಂಡರಾದ ರಾಜು ಹಿರೇವಡೆಯರ, ಶಿವಲಿಂಗಪ್ಪ ಶ್ರೀಂಗಾರಿ, ಮಣಿಕಂಠ ಗುಡಿಹಾಳ, ತಾಜುದ್ದೀನ ಮುನವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>