ಲಿಂಗರಾಜಪುರ ನಿವಾಸಿ ಶಾಂತಮ್ಮ (52) ಅ.10ರಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಅವರ ಮಗಳು ರಾಧಿಕಾ ಬಾಣಸವಾಡಿ ಠಾಣೆಗೆ ದೂರು ಕೊಟ್ಟಿದ್ದರು. ಶನಿವಾರ ಬೆಳಿಗ್ಗೆ ಹೆಣ್ಣೂರು ಬಂಡೆಯ ಪೊದೆಯಲ್ಲಿ ಶಾಂತಮ್ಮ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೊಲೆ (ಐಪಿಸಿ 302) ಹಾಗೂ ಸಾಕ್ಷ್ಯ ನಾಶಕ್ಕೆ ಯತ್ನ (201) ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಪೊಲೀಸರು, ಸಂಜೆಯೇ ಆರೋಪಿಗಳನ್ನು ಬಂಧಿಸಿದ್ದಾರೆ.