ಮಠದ ಆಡಳಿತಾಧಿಕಾರಿಯೂ ಆದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಈಶಪ್ಪ ಕೆ ಭೂತೆ ಅವರು ಕೈಲಾಸ ಮಂಟಪದ ಮುಂಭಾಗ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೀಪಗಳು ಅಂತರಂಗದ ಜ್ಯೋತಿಯಾಗಿ ಬೆಳಗಲಿ ಎಂದು ಅವರು ಆಶಿಸಿದರು. ದೀಪಕ್ಕೆ ಜಾತಿ ಇದೆ, ಬತ್ತಿಗೆ ಜಾತಿ ಇದೆ, ಎಣ್ಣೆಗೆ ಜಾತಿ ಇದೆ ಆದರೆ ಜ್ಯೋತಿಗೆ ಜಾತಿ ಇಲ್ಲ. ಈ ಬೆಳಕಿನಲ್ಲಿ ಅಜ್ಞಾನ ಕಳೆದು ಹೋಗಲಿ ಎಂದು ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ ಹೇಳಿದರು. ನಾಶಿಕ್ ಶರಣಪ್ಪನವರ ಮಠದ ವಾಸುದೇವಾನಂದ ಸ್ವಾಮೀಜಿ, ಸಿದ್ಧಾರೂಢಸ್ವಾಮಿ ಮಠದ ಟ್ರಸ್ಟ್ನ ಡಿ.ಡಿ. ಮಾಳಗಿ ಇದ್ದರು.