ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾನ್ ಸುಳ್ಳುಗಾರ ಮೋದಿ’

Last Updated 8 ಮೇ 2018, 9:38 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ): ಸ್ವತಂತ್ರ ಭಾರತದ ಇತಿಹಾಸದಲ್ಲಿ ಮಹಾನ್ ಸುಳ್ಳುಗಾರ ‘ಮಿಸ್ಟರ್ ಮೋದಿ’. ಅವರದು ‘ಡೀಲ್’ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕಿಡಿಕಾರಿದರು.

ಹನೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ‘ಯಡಿಯೂರಪ್ಪ ಅಧಿಕಾರದಲ್ಲಿ ಇದ್ದಾಗ ರೈತರ ಸಾಲ ಮನ್ನಾ ಮಾಡಲು ಆಗಲಿಲ್ಲ. ಆಗ ಕೇಳಿದರೆ ನಮ್ಮ ಬಳಿ ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದಿದ್ದರು. ಆದರೆ, ಈಗ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವರಿಗೆ ಒಂದು ನಾಲಿಗೆನಾ, ಎರಡು ನಾಲಿಗೆನಾ’ ಎಂದು ಹರಿಹಾಯ್ದರು.

‘ಜೈಲಿಗೆ ಹೋಗಿ ಬಂದಿರುವ ಯಡಿಯೂರಪ್ಪ ಇನ್ನು ಏನು ತಾನೇ ಹೇಳಲು ಸಾಧ್ಯ. ಜೈಲಿಗೆ ಕಳುಹಿಸುತ್ತೇನೆ ಎನ್ನುತ್ತಾ ಕನವರಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಪರಿವಾರ ಹಾಗೂ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದು ನಾವು ಎಂದು ಬಿಜೆಪಿಯವರು ಬೊಬ್ಬೆಯಿಡುತ್ತಿದ್ದಾರೆ. ಮೊದಲು ಶಿಫಾರಸು ಮಾಡಿದ್ದು ಕಾಂಗ್ರೆಸ್ ಎಂಬುದು ಮರೆತಂತಿದೆ’ ಎಂದು ಚಾಟಿ ಬೀಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT