ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಮಾಪನ ಇಲಾಖೆಗೆ ಮತ್ತೆ ಮೌದ್ಗಿಲ್

ಉಜ್ವಲ್‌ಕುಮಾರ್ ಘೋಷ್‌ಗೆ ಒಂದೇ ದಿನಕ್ಕೆ ವರ್ಗಾ
Last Updated 20 ಸೆಪ್ಟೆಂಬರ್ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ಭೂ ಮಾಪನ ಇಲಾಖೆ ಆಯುಕ್ತರನ್ನಾಗಿ ಮತ್ತೆ ಮುನಿಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕಳೆದ ಮೂರೂವರೆ ವರ್ಷಗಳಿಂದ ಭೂ ಮಾಪನ ಇಲಾಖೆ ಆಯುಕ್ತರಾಗಿ ಅವರು ಕೆಲಸ ನಿರ್ವಹಿಸಿದ್ದರು. ಇತ್ತೀಚೆಗೆ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ಅದೇ ಹುದ್ದೆಗೆ ವರ್ಗಾಯಿಸಲಾಗಿದೆ.

ಮೌದ್ಗಿಲ್ ವರ್ಗಾವಣೆ ನಂತರ ಆ ಜಾಗಕ್ಕೆ ವರ್ಗಾವಣೆಯಾಗಿದ್ದ ಎಂ.ಟಿ.ರೇಜು ಅವರ ವರ್ಗಾವಣೆಯನ್ನು ರದ್ದುಪಡಿಸಿ, ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕ ಹುದ್ದೆಯಲ್ಲೇ ಮುಂದುವರಿಸಲಾಗಿತ್ತು. ನಂತರ ಈ ಜಾಗಕ್ಕೆ ವರ್ಗಾವಣೆಯಾಗಿದ್ದ, ಉಜ್ವಲ್‌ಕುಮಾರ್ ಘೋಷ್ ಗುರುವಾರವಷ್ಟೇ ಅಧಿಕಾರ ಸ್ವೀಕರಿಸಿದ್ದು, ಒಂದೇ ದಿನಕ್ಕೆ ಎತ್ತಂಗಡಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT