ಮಹೇಶ್ ನಾಲವಾಡ ಕಾಂಗ್ರೆಸ್ ಬಿಟ್ಟರೂ ಪಕ್ಷದ ಎಲ್ಲ ಕಾರ್ಯಕರ್ತರು ಪಕ್ಷದಲ್ಲೇ ಇದ್ದಾರೆ. ಆದ್ದರಿಂದ ಚಿಂತೆ ಮಾಡುವ ಅಗತ್ಯ ಇಲ್ಲ. ಪಕ್ಷದ ಪರವಾಗಿ ಇರುವ ಎಲ್ಲರೂ ಮತದಾನ ಮಾಡುವಂತೆ ನೋಡಿಕೊಳ್ಳಬೇಕು ಎಂದು ಕಾರ್ತಕರ್ತರು ಸಲಹೆ ನೀಡಿದರು. ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ವೀರಣ್ಣ ಮತ್ತೀಕಟ್ಟಿ, ತಾರಾದೇವಿ ವಾಲಿ, ನವೀದ್ ಮುಲ್ಲಾ, ಶಿವ ನಾಯಕ್, ರಾಯನಗೌಡ ಇದ್ದರು.