<p><strong>ಬೆಂಗಳೂರು:</strong> ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ರೆಸಾರ್ಟ್ನಲ್ಲೇ ಮತ್ತೆ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ವಿಧಾನಸಭೆ ಕಲಾಪ ಮುಗಿದ ನಂತರ ರೆಸಾರ್ಟ್ಗೆ ಕರೆದುಕೊಂಡು ಹೋಗಲಾಗಿದೆ.</p>.<p>ಆಪರೇಷನ್ ಕಮಲ, ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್, ಜೆಡಿಎಸ್ ಮುಖಂಡರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ರೇಸಾರ್ಟ್ನಲ್ಲೇ ತಂಗುವ ವ್ಯವಸ್ಥೆ ಮಾಡಿದ್ದರು. ಬಿಜೆಪಿ ಸಹ ತಮ್ಮ ಶಾಸಕರ ಸುರಕ್ಷತೆ ದೃಷ್ಟಿಯಿಂದ ರೇಸಾರ್ಟ್ನಲ್ಲೇ ವಾಸ್ತವ್ಯ ಕಲ್ಪಿಸಿದೆ.</p>.<p>ಅಧಿವೇಶನದ ಸಮಯದಲ್ಲಿ ಶುಕ್ರವಾರಕ್ಕೆ ಕಲಾಪ ಕೊನೆಗೊಂಡು, ಅಂದೇ ರಾತ್ರಿ ಅಥವಾ ಮರುದಿನ ತಮ್ಮ ಕ್ಷೇತ್ರಗಳಿಗೆ ತೆರಳುತ್ತಿದ್ದರು. ಮತ್ತೆ ಸೋಮವಾರ ಆರಂಭವಾಗುವ ಕಲಾಪದಲ್ಲಿ ಭಾಗವಹಿಸುತ್ತಿದ್ದರು. ಆದರೆ ಈ ಸಲ ಮುಖ್ಯಮಂತ್ರಿ ವಿಶ್ವಾಸಮತ ನಿರ್ಣಯ ಮಂಡನೆ ಮಾಡಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಕ್ಷೇತ್ರಗಳಿಗೆ ಕಳುಹಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ರೆಸಾರ್ಟ್ನಲ್ಲೇ ಮತ್ತೆ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ವಿಧಾನಸಭೆ ಕಲಾಪ ಮುಗಿದ ನಂತರ ರೆಸಾರ್ಟ್ಗೆ ಕರೆದುಕೊಂಡು ಹೋಗಲಾಗಿದೆ.</p>.<p>ಆಪರೇಷನ್ ಕಮಲ, ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್, ಜೆಡಿಎಸ್ ಮುಖಂಡರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ರೇಸಾರ್ಟ್ನಲ್ಲೇ ತಂಗುವ ವ್ಯವಸ್ಥೆ ಮಾಡಿದ್ದರು. ಬಿಜೆಪಿ ಸಹ ತಮ್ಮ ಶಾಸಕರ ಸುರಕ್ಷತೆ ದೃಷ್ಟಿಯಿಂದ ರೇಸಾರ್ಟ್ನಲ್ಲೇ ವಾಸ್ತವ್ಯ ಕಲ್ಪಿಸಿದೆ.</p>.<p>ಅಧಿವೇಶನದ ಸಮಯದಲ್ಲಿ ಶುಕ್ರವಾರಕ್ಕೆ ಕಲಾಪ ಕೊನೆಗೊಂಡು, ಅಂದೇ ರಾತ್ರಿ ಅಥವಾ ಮರುದಿನ ತಮ್ಮ ಕ್ಷೇತ್ರಗಳಿಗೆ ತೆರಳುತ್ತಿದ್ದರು. ಮತ್ತೆ ಸೋಮವಾರ ಆರಂಭವಾಗುವ ಕಲಾಪದಲ್ಲಿ ಭಾಗವಹಿಸುತ್ತಿದ್ದರು. ಆದರೆ ಈ ಸಲ ಮುಖ್ಯಮಂತ್ರಿ ವಿಶ್ವಾಸಮತ ನಿರ್ಣಯ ಮಂಡನೆ ಮಾಡಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಕ್ಷೇತ್ರಗಳಿಗೆ ಕಳುಹಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>