ಬೆಂಗಳೂರು: ‘ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ಧ್ವನಿ ಅನುಕರಿಸಿ ಫೋನ್ ಕರೆ ಮಾಡಿದ ವ್ಯಕ್ತಿ, ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಮಾಡುವ ಶಿಫಾರಸು ಪಟ್ಟಿಗೆ ಇಂತಹವರನ್ನು ಸೇರಿಸಿ ಎಂದು ಹೇಳಿದ ವಕೀಲರ ಹೆಸರುಗಳು ಯಾವುವು ಎಂಬುದನ್ನು ಬಹಿರಂಗಪಡಿಸಿ’ ಎಂದು ಬೆಂಗಳೂರು ವಕೀಲರ ಸಂಘ ರಾಜ್ಯ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿಗೆ ಪತ್ರ ಬರೆದಿದೆ.