ಅರಸೀಕೆರೆ ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೃಹ ಸಚಿವ ಎಂ.ಬಿ. ಪಾಟೀಲ ಬದ್ಧತೆಯಿಂದ ನಡೆದುಕೊಂಡಿದ್ದು, ಹೋರಾಟದಿಂದ ಹಿಂದೆ ಸರಿದಿಲ್ಲ. ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ಗೆ ಹಿನ್ನಡೆಯಾಯಿತು ಎಂದಿರುವ ಸಚಿವ ಡಿ.ಕೆ. ಶಿವಕುಮಾರ್ ಲಿಂಗಾಯತರಲ್ಲ. ಅವರ ಬಗ್ಗೆ ಮಾತನಾಡದೇ ಇರುವುದು ಸೂಕ್ತ’ ಎಂದು ತಿರುಗೇಟು ನೀಡಿದರು.