ಬೆಂಗಳೂರು: ‘ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಸಚಿವರಾದ ಡಿ.ಕೆ. ಶಿವಕುಮಾರ ಮತ್ತು ಎಂ.ಬಿ. ಪಾಟೀಲ ನೀಡಿರುವ ಹೇಳಿಕೆಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಭಾನುವಾರ ಮಾತನಾಡಿದ ಅವರು, ‘ಅವರಿಬ್ಬರ ಹೇಳಿಕೆಗಳು ಒಂದು ಸಮುದಾಯಕ್ಕೆ ಸಂಬಂಧಪಟ್ಟದ್ದು. ಆದರೂ, ಚುನಾವಣೆ ಸಂದರ್ಭದಲ್ಲಿ ಇಂಥ ಹೇಳಿಕೆ ನೀಡಿ ಗೊಂದಲ ಸೃಷ್ಟಿಸದಂತೆ ಇಬ್ಬರು ನಾಯಕರಿಗೂ ಎಚ್ಚರಿಕೆ ನೀಡಿದ್ದೇನೆ’ ಎಂದರು.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕ್ಷಮೆ ಕೇಳುವುದಾಗಿ ಶಿವಕುಮಾರ್ ನೀಡಿದ್ದ ಹೇಳಿಕೆಗೆ, ‘ಕ್ಷಮೆ ಕೇಳೋಕೆ ಅವನ್ಯಾರು’ ಎಂದು ಎಂ.ಬಿ. ಪಾಟೀಲ ಕಿಡಿಕಾರಿದ್ದರು.