ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ರಾಜ್ಯ ಮಟ್ಟದ ಉತ್ತಮ ಮತದಾರ ಸಾಕ್ಷರತಾ ಸಂಘ (ಇಎಲ್ಸಿ) ಎಂದು ಪರಿಗಣಿಸಿ ಭಾರತ ಚುನಾವಣಾ ಆಯೋಗವು ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಕಾಲೇಜಿನ ಮತದಾರ ಸಾಕ್ಷರತಾ ಸಂಘದ ನೋಡಲ್ ಅಧಿಕಾರಿ ಹಾಗೂ ಉಪನ್ಯಾಸಕ ಸಿ.ಎಲ್.ಸತೀಶ್ ಕುಮಾರ್ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಪ್ರಶಸ್ತಿ ನೀಡಿ ಗೌರವಿಸಿದರು.