‘ಸಂಘದ ಠೇವಣಿಯಲ್ಲಿರುವ ಹಣದ ಲೆಕ್ಕಪತ್ರ ಬಹಿರಂಗಪಡಿಸಬೇಕು. ಸಂಘದ ಕಟ್ಟಡದ ಬಾಡಿಗೆದಾರರಿಂದ ಬಂದ ಮುಂಗಡ ಹಣ ಮತ್ತು ಬರುವ ಮಾಸಿಕ ಬಾಡಿಗೆ ಎಷ್ಟು, ಸಂಘದ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳಿಂದ ಬರುವ ಹಣವೆಷ್ಟು, ದೆಹಲಿ ಚಲೋ ಕಾರ್ಯಕ್ರಮಕ್ಕೆ ಸಂಗ್ರಹಿಸಿದ ಹಣ ಮತ್ತು ಖರ್ಚಿನ ವಿವರ, ಚಿತ್ರದುರ್ಗ ಸ್ವಾಮೀಜಿಗಳ ಪಟ್ಟಾಭಿಷೇಕಕ್ಕೆ ಸಂಗ್ರಹಿಸಿದ ಹಣ ಮತ್ತು ಖರ್ಚಿನ ವಿವರ ಬಹಿರಂಗಪಡಿಸಬೇಕು’ ಎಂದೂ ಪ್ರತಿಭಟನೆಕಾರರು ಆಗ್ರಹಿಸಿದರು.