ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 7 ರಂದು ಅದೇ ಬ್ಯಾಂಕ್ ಬಳಿ ಕಳವು ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕಂಡು, ಅನುಮಾನಗೊಂಡ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ವಿಚಾರಣೆ ವೇಳೆ ವಿನೋದ್ರಾಜ್ ಕಾರಿನಲ್ಲಿ ಹಣ ಕಳವು ಮಾಡಿದ ಪ್ರಕರಣ ಕೂಡ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಮೂವರು, ಚಿನ್ನ (34), ತುಳಸಿ (27), ಮತ್ತು ನರೇಶ್ (26) ಅವರ ಪತ್ತೆಗೆ ಹುಡುಕಾಟ ನಡೆದಿದೆ.