ಕಾಫಿಬೋರ್ಡ್ ಲೇಔಟ್, ಭುವನೇಶ್ವರಿನಗರ, ಭಾರತ್ನಗರ, ಫಾತಿಮಾ ಲೇಔಟ್, ಅಮರಜ್ಯೋತಿ ಲೇಔಟ್ ಸೇರಿದಂತೆ ಇತರ ಪ್ರದೇಶಗಳಲ್ಲಿ ಜಲಮಂಡಳಿಯಿಂದ ಕಾಮಗಾರಿಗಳು ಪೂರ್ಣಗೊಂಡಿವೆ. ಕಾಮಗಾರಿಗಳಿಗಾಗಿ ಅಗೆದ ರಸ್ತೆಗಳ ಪುನರ್ನಿರ್ಮಾಣ ಕಾರ್ಯ ಬಾಕಿ ಉಳಿದಿದೆ. ಎಂ.ಎಸ್.ಆರ್ ಬಡಾವಣೆಯಲ್ಲಿ ರೊಬೋಟಿಕ್ ಯಂತ್ರಗಳ ಮೂಲಕ ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾಮಗಾರಿಯನ್ನೂ ತಪಾಸಣೆ ನಡೆಸಿದರು. ಮಳೆಗಾಲ ಈಗಾಗಲೇ ಆರಂಭವಾಗಿದ್ದು, ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.