ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಸೋಮವಾರ ಪ್ರಕಟಿಸಿದರು. ‘ಈ ಪ್ರಕರಣದ ತನಿಖೆಯನ್ನು ತನಿಖಾಧಿಕಾರಿ ಅತ್ಯಂತ ಅನ್ಯಮನಸ್ಕರಾಗಿ ಮತ್ತು ಅಜಾಗರೂಕತೆಯಿಂದ ನಡೆಸಿದ್ದಾರೆ. ಹೀಗಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆ ಮಾಡಲಾಗುತ್ತಿದೆ. ಆದ್ದರಿಂದ, ಈ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ತಪ್ಪು ಎಸಗಿದ್ದು, ಅವರ ವಿರುದ್ಧ ಡಿಜಿ ಮತ್ತು ಐಜಿ ಸೂಕ್ರ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.ಆರೋಪಿಗಳಾದ ಸಿ.ಪಿ.ಯೋಗೇಶ್ವರ, ಎಸ್.ಪಿ.ಗಂಗಾಧರೇಶ್ವರ, ಪಿ.ಮಹದೇವಪ್ಪ ಮತ್ತು ಎಚ್.ಆರ್.ರಮೇಶ್ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆರೋಪಿಗಳು.