ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಾಥಪುರದಲ್ಲಿ 19 ಉಗ್ರರು: ಡಿಜಿಪಿ ಪತ್ರ ವೈರಲ್

Last Updated 26 ಏಪ್ರಿಲ್ 2019, 20:57 IST
ಅಕ್ಷರ ಗಾತ್ರ

ಬೆಂಗಳೂರು: 'ತಮಿಳುನಾಡಿನ ರಾಮನಾಥಪುರದಲ್ಲಿ 19 ಉಗ್ರರು ಅವಿತುಕೊಂಡಿದ್ದಾರೆ' ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರು ನೆರೆ ರಾಜ್ಯಗಳಿಗೆ ಕಳುಹಿಸಿದ್ದಾರೆ ಎನ್ನಲಾದ ತುರ್ತು ಸಂದೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

'ಬೆಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ಶುಕ್ರವಾರ ಸಂಜೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, 'ತಮಿಳುನಾಡಿನ ರಾಮನಾಥಪುರದಲ್ಲಿ 19 ಉಗ್ರರು ಇದ್ದಾರೆ' ಎಂದು ಮಾಹಿತಿ ನೀಡಿದ್ದಾನೆ ಎಂದು ಪತ್ರದಲ್ಲಿ ಬರೆಯಲಾಗಿದೆ.

'ನಾನು ಹೊಸೂರಿನ ನಿವಾಸಿ ಆಗಿದ್ದು, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಉಗ್ರರ ಬಗ್ಗೆ ಖಚಿತ‌ ಮಾಹಿತಿ ಇದೆ' ಎಂದು ಆತ ಹೇಳಿದ್ದಾನೆ.

'ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಗೋವಾ ಹಾಗೂ ಹಲವು ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ' ಎಂದು ಆ ವ್ಯಕ್ತಿ ಹೇಳಿದ್ದಾನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT