ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಉತ್ಪಾದಕರ ಸಂಘಕ್ಕೆ ನಿರ್ದೇಶಕರ ಆಯ್ಕೆ

Last Updated 17 ಜನವರಿ 2019, 18:47 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕು ಎಚ್.ಗೊಲ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹನುಮಯ್ಯ, ಚಿಕ್ಕಮುನಿಯಪ್ಪ, ಮಹದೇವಯ್ಯ, ವಿಜಿಕುಮಾರ್, ಸೆಲ್ವನಾಥನ್, ಸೂಸಪ್ಪ, ನಾಗರಾಜು, ರತ್ನಮ್ಮ, ಲಕ್ಷ್ಮಮ್ಮ, ಚಿಕ್ಕಗಾಳಪ್ಪ, ಹನುಮಂತಪ್ಪ, ಹನುಮಂತಯ್ಯ ಹಾಗೂ ಹನುಮಕ್ಕ ನೂತನ ನಿರ್ದೇಶಕರಾಗಿ ಆಯ್ಕೆಯಾದರು.

ಆಯ್ಕೆಯಾದವರನ್ನು ಅಭಿನಂದಿಸಿದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಆರ್.ಶಿವಮಾದಯ್ಯ, ‘ಆರ್ಥಿಕವಾಗಿ ಬಸವಳಿದಿರುವ ರೈತ ಕುಟುಂಬಗಳಿಗೆ ಹೈನುಗಾರಿಕೆ ಲಾಭದಾಯಕ ಕಸುಬು. ಯುವ ರೈತ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು’ ಎಂದರು. ‘ಒಕ್ಕಲುತನ ಮಾಡುತ್ತಿರುವವರ ಪ್ರಗತಿಯಲ್ಲಿ ಸಹಕಾರಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದು. ಆಡಳಿತ ಮಂಡಳಿ ರೈತಪರವಾಗಿ ಶ್ರಮಿಸುವ ಮೂಲಕ ಮಾದರಿ ಸಂಘವಾಗಿ ರೂಪುಗೊಳ್ಳಬೇಕು’ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಆರಾಧನಾ ಸಮಿತಿ ಮಾಜಿ ಅಧ್ಯಕ್ಷ ದೊಡ್ಡಬೆಲೆ ಎಂ. ನಾರಾಯಣಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT