‘ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಅರಿತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಒಗ್ಗೂಡಿಸಿ ಅವರ ಕಷ್ಟಕ್ಕೆ ಸ್ಪಂದಿಸಿದರು. ಇದರ ಫಲವಾಗಿ ಬಿಬಿಎಂಪಿ ಹಾಗೂ ಸರ್ಕಾರದ ವತಿಯಿಂದ ಅವರಿಗೆ ಗುರುತಿನ ಚೀಟಿ ಹಂಚಿಕೆ ಮಾಡಲಾಗುತ್ತಿದೆ. ಗುರುತಿನ ಚೀಟಿ ಹೊಂದಿರುವ ವ್ಯಾಪಾರಿಗಳಿಗೆ ₹10 ಸಾವಿರದವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಮಹಿಳಾ ವ್ಯಾಪಾರಿಗಳಿಗೆ ₹10 ಸಾವಿರದವರೆಗೆ ಪ್ರೋತ್ಸಾಹ ಧನ ನೀಡಲಾಗುವುದು’ ಎಂದರು.