ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರೈತರ ಎಲ್ಲ ಬಗೆಯ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿ, ಈಗ ಮೀನಮೇಷ ಎಣಿಸುತ್ತಿದ್ದಾರೆ. ಸಾಲ ಮನ್ನಾ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ವೃಥಾ ಕಸರತ್ತು ನಡೆಯುತ್ತಿದ್ದು, ಇದನ್ನು ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. 6 ತಿಂಗಳ ನಂತರ ಮುಖ್ಯಮಂತ್ರಿ ಕುರ್ಚಿಯೇ ಸಾಕು ಎಂಬಮಾತು ಕುಮಾರಸ್ವಾಮಿ ತುಟಿ ಅಂಚಿನಲ್ಲಿದೆ’ ಎಂದು ಅವರು ಕುಟುಕಿದರು.