ವಲಸೆ ಕಾರ್ಮಿಕರು ಊರಿಗೆ ಮರಳುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟ ಬಳಿಕ ಮೆಜೆಸ್ಟಿಕ್ನ ಬಸ್ನಿಲ್ದಾಣದಲ್ಲಿ ಹಾಗೂ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣದಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಮಿಕರು ಸೇರಿದ್ದರು. ಆದರೆ ಅಲ್ಲಿ ಅಷ್ಟೊಂದು ಸಂಖ್ಯೆಯ ಜನರಿಗೆ ಊಟ ಒದಗಿಸುವ ವ್ಯವಸ್ಥೆ ಇರಲಿಲ್ಲ. ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿ, ‘ಊರಿಗೆ ಹೊರಟ ಕಾರ್ಮಿಕರಿಗೆ ತಕ್ಷಣ ಊಟದ ವ್ಯವಸ್ಥೆ ಕಲ್ಪಿಸಲು ಸಾಧ್ಯವೇ’ ಎಂದು ಕೇಳಿದ್ದರು. ಬಿಬಿಎಂಪಿ ಅಧಿಕಾರಿಗಳು ಸಂಚಾರ ಇಂದಿರಾ ಕ್ಯಾಂಟೀನ್ಗಳನ್ನು ತಕ್ಷಣವೇ ಮೆಜೆಸ್ಟಿಕ್ಗೆ ಕಳುಹಿಸಿ ಹಸಿದ ಹೊಟ್ಟೆಯಲ್ಲಿದ್ದವರಿಗೆ ಊಟದ ವ್ಯವಸ್ಥೆ ಮಾಡಿದರು.