ಬೆಂಗಳೂರು: ಮಹಿಳೆ ಸ್ನಾನ ಮಾಡುತ್ತಿದ್ದ ಕೋಣೆಯ ಕಿಟಕಿಯಲ್ಲಿ ಇಣುಕಿ ಮಾಂಗಲ್ಯ ಸರ ಕದ್ದಿದ್ದ ರಮೇಶ್ ಎಂಬಾತನನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ‘ಬಂಧಿತ ರಾಯಸಂದ್ರದ ನಿವಾಸಿ, ಆಟೊ ಚಾಲಕ. 42 ವರ್ಷದ ಮಹಿಳೆ ನೀಡಿದ್ದ ದೂರಿನಡಿ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.