ರಾಜರಾಜೇಶ್ವರಿನಗರದ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ನೀವು ಹೇಳುವ ಕಥೆ ಕೇಳುವುದಕ್ಕೆ ನಾವು ಬಂದಿಲ್ಲ. ಯಾವ ಕೆಲಸವಾಗಿದೆ, ಮುಂದೆ ಯಾವ ಯಾವ ಕಾಮಗಾರಿ ಕೈಗೊಳ್ಳಬೇಕು, ಯಾವ್ಯಾವ ವಾರ್ಡ್ನಲ್ಲಿ ಕಾಮಗಾರಿ ತೆಗೆದುಕೊಳ್ಳಲಾಗುತ್ತಿದೆ ಎಂಬುದನ್ನು ಬಿಬಿಎಂಪಿ ಸದಸ್ಯರ ಗಮನಕ್ಕೆ ತನ್ನಿ. ಪ್ರಗತಿಯಲ್ಲಿರುವ ಕೆಲಸಗಳನ್ನು ನನ್ನ ಗಮನಕ್ಕೂ ತನ್ನಿ’ ಎಂದು ಸೂಚಿಸಿದರು.