ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಎಲ್ವಿ ಪಾರ್ಕ್ ವ್ಯೂವ್ ಅಪಾರ್ಟ್ಮೆಂಟ್ನಲ್ಲಿ2018ರ ವಿಧಾನಸಭಾ ಚುನಾವಣೆ ವೇಳೆ ಮೇ 12ರಂದು ದೊರೆತಿದ್ದ 10 ಸಾವಿರಕ್ಕೂ ನಕಲಿ ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಎನ್.ರಾಕೇಶ್ ಈ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ತನಿಖೆ ನಡೆಸಿ ಮುನಿರತ್ನ ಸೇರಿದಂತೆ 34 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.