ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತು ಸೀಳಿ ಮಹಿಳೆಯ ಹತ್ಯೆ

Last Updated 9 ಮೇ 2019, 19:53 IST
ಅಕ್ಷರ ಗಾತ್ರ

ಬೆಂಗಳೂರು: ಹೂವು ಮಾರಿಕೊಂಡು ಒಂಟಿಯಾಗಿ ಬದುಕುತ್ತಿದ್ದ ಭಾಗ್ಯಮ್ಮ (45) ಎಂಬುವರನ್ನು ದುಷ್ಕರ್ಮಿಗಳು ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಇಸ್ರೊ ಲೇಔಟ್ ಸಮೀಪದ ವಸಂತ ವಲ್ಲಭನಗರ ನಿವಾಸಿಯಾದ ಅವರು, ಮೂರು ದಿನಗಳಿಂದ ವ್ಯಾಪಾರಕ್ಕೆ ಹೋಗಿರಲಿಲ್ಲ. ಗುರುವಾರ ಬೆಳಿಗ್ಗೆ ಮನೆ ಹತ್ತಿರ ದುರ್ವಾಸನೆ ಬರುತ್ತಿದ್ದರಿಂದ, ಸ್ಥಳೀಯರು ಭಾಗ್ಯಮ್ಮ ಅವರ ಅಣ್ಣನಿಗೆ ವಿಷಯ ಮುಟ್ಟಿಸಿದ್ದರು.

ಅವರು ಮನೆಗೆ ಬಂದು ನೋಡಿದಾಗ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶವ ‍ಪತ್ತೆಯಾಗಿದೆ. ಕೂಡಲೇ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ‘ಕೆಲ ದಿನಗಳ ಹಿಂದೆ ಮನೆ ಬಳಿ ಗಲಾಟೆ ಮಾಡುತ್ತಿದ್ದ ಪಾನಮತ್ತ ಯುವಕರಿಗೆ ಭಾಗ್ಯಮ್ಮ ಬೈದಿದ್ದರು. ಅದೇ ಸಿಟ್ಟಿನಲ್ಲಿ ಆ ಯುವಕರೇ ಕೃತ್ಯ ಎಸಗಿರಬಹುದು ಎಂಬ ಅನುಮಾನವಿದೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT