ಬುಧವಾರ ಬೆಳಿಗ್ಗೆ ಅಂಗಡಿಗೆ ಬಂದ ಎಲ್ಲರೂ ಮಧ್ಯಾಹ್ನದವರೆಗೆ ಕೆಲಸ ಮಾಡಿ, ನಂತರ ಅದೇ ಹಣದಲ್ಲಿ ಊಟ ಮಾಡಿಕೊಂಡು ವಾಪಸು ಬಂದಿದ್ದಾರೆ. ಉಳಿಕೆ ಹಣದ ಹಂಚಿಕೆ ವಿಚಾರದಲ್ಲಿ ನಾಲ್ವರ ನಡುವೆ ಜಗಳ ನಡೆದಿದೆ. ಇದು ವಿಕೋಪಕ್ಕೆ ತಿರುಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅದನ್ನು ಗಮನಿಸಿದ ಸಿಗ್ಮತ್, ಮಧ್ಯಪ್ರವೇಶಿಸಿ ಜಗಳ ನಿಲ್ಲಿಸುವಂತೆ ಮನವಿ ಮಾಡಿದ್ದಾನೆ.