‘ಗೀತಾದೇವಿಯವರ ಸಹೋದರ, ಬೆಂಗಳೂರಿನಲ್ಲಿ ವಾಸವಿದ್ದಾರೆ. ಶವ ಕಂಡಿದ್ದ ನಿವಾಸಿಯೊಬ್ಬರು, ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆರಂಭದಲ್ಲಿ ಅಪರಿಚಿತರು ಕೊಲೆ ಮಾಡಿರಬಹುದು ಎಂಬ ಶಂಕೆ ಇತ್ತು. ಸಂಬಂಧಿಕರು ನೀಡಿದ್ದ ಮಾಹಿತಿಯಂತೆ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ತಪ್ಪೊಪ್ಪಿಕೊಂಡ’ ಎಂದರು.