ಮಂಗಳವಾರ ವರದಿ ಕೊಟ್ಟ ವೈದ್ಯರು, ‘ರವೀಂದ್ರ ಅವರ ದೇಹದ ಮೇಲೆ ಗಾಯದ ಗುರುತುಗಳಿವೆ. ಯಾರೋ ಉಸಿರುಗಟ್ಟಿಸಿ ಅವರನ್ನು ಕೊಂದು, ನಂತರ ನೇಣಿನ ಕುಣಿಕೆ ಬಿಗಿದಿದ್ದಾರೆ’ ಎಂದು ಅಭಿಪ್ರಾಯಪಟ್ಟಿದ್ದರು. ಆ ನಂತರ ತನಿಖೆ ಚುರುಕುಗೊಳಿಸಿದ ಪೊಲೀಸರು ಮೃತರ ಸಂಬಂಧಿಕರು ಹಾಗೂ ಸ್ಥಳೀಯರನ್ನು ವಿಚಾರಣೆ ನಡೆಸಿದ್ದರು. ಆಗ ಅವರೆಲ್ಲ ರಾಜ್ ಬಿಸ್ಟಾನ ಮೇಲೆ ಸಂಶಯ ವ್ಯಕ್ತಪಡಿಸಿದ್ದರು.