ವೈದ್ಯ ಸೆರೆ

ಬೆಂಗಳೂರು: ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ನ ಮನೆಯಲ್ಲಿ ತಾಯಿ ಹಾಗೂ ತಂಗಿಯನ್ನು ಕೊಂದಿದ್ದ ಆರೋಪದಡಿ ವೈದ್ಯ ಗೋವಿಂದ ಪ್ರಕಾಶ್ನನ್ನು (45) ಪೊಲೀಸರು ಬಂಧಿಸಿದ್ದಾರೆ.
ತನಗೆ ಮದುವೆಯಾಗಿಲ್ಲವೆಂದು ಮಾನಸಿಕವಾಗಿ ನೊಂದಿದ್ದ ಎನ್ನಲಾದ ವೈದ್ಯ, ತಾಯಿ ಮೂಕಾಂಬಿಕಾ (75) ಹಾಗೂ ತಂಗಿ ಶ್ಯಾಮಲಾ (40) ಅವರಿಗೆ ವಿಷದ ಚುಚ್ಚುಮದ್ದು ನೀಡಿ ಕೊಂದಿದ್ದ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘45 ವರ್ಷವಾದರೂ ಯಾವ ಹುಡುಗಿಯೂ ನನ್ನನ್ನು ಮದುವೆಯಾಗಲು ಇಷ್ಟ ಪಡುತ್ತಿರಲಿಲ್ಲ. ಅದನ್ನೇ ಮುಂದಿಟ್ಟುಕೊಂಡು ಸ್ನೇಹಿತರು ಪದೇ ಪದೇ ರೇಗಿಸುತ್ತಿದ್ದರು. ಅದು ಮನಸ್ಸಿಗೆ ನೋವುಂಟು ಮಾಡಿತ್ತು. ತಂಗಿ ಹಾಗೂ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಮೂವರು ಸೇರಿಯೇ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು’ ಎಂದು ಆರೋಪಿ ಹೇಳಿಕೆ ನೀಡಿದ್ದಾನೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.