ಈ ಮಧ್ಯೆ, ದಕ್ಷಿಣ ಕನ್ನಡ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ನಾಯಕರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರನ್ನು ವರಿಷ್ಠರು ಗುರುವಾರ ದೆಹಲಿಗೆ ಬರುವಂತೆ ಬುಲಾವ್ ಕಳುಹಿಸಿದ್ದಾರೆ. ಈ ಕ್ಷೇತ್ರದಿಂದ ಮೊಯಿದ್ದೀನ್ ಬಾವಾ ಟಿಕೆಟ್ ಆಕಾಂಕ್ಷಿಯಾಗಿರುವುದರಿಂದ ವರಿಷ್ಠರ ಈ ನಡೆ ಕುತೂಹಲ ಮೂಡಿಸಿದೆ.