<p><strong>ಮೈಸೂರು</strong>: ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಸೇಂಟ್ ಜೋಸೆಫ್ ಆಸ್ಪತ್ರೆ, ನಾರಾಯಣ ಆಸ್ಪತ್ರೆ ಹಾಗೂ ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲಾಗಿದೆ.</p>.<p>ಸಂಸದ ಪ್ರತಾಪಸಿಂಹ ಅವರು ಸೋಮವಾರ ಈ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸೋಂಕಿತರ ಚಿಕಿತ್ಸೆಗಾಗಿ ಅಗತ್ಯ ಸಂದರ್ಭದಲ್ಲಿ ಹಾಸಿಗೆ ದೊರಕಿಸಿಕೊಡುವುದಾಗಿ ಈ ಮೂರೂ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.</p>.<p>ಖಾಸಗಿ ಆಸ್ಪತ್ರೆಗಳವರು ‘ಮಹಾನ್’ ಸಂಘಟನೆ ಮಾಡಿಕೊಂಡಿದ್ದಾರೆ. ಅದರಡಿ ವಿಕ್ರಂ ಆಸ್ಪತ್ರೆ, ಬಿ.ಎಂ.ಆಸ್ಪತ್ರೆ, ಸೇಂಟ್ ಜೋಸೆಫ್ ಆಸ್ಪತ್ರೆ, ನಾರಾಯಣ ಆಸ್ಪತ್ರೆ ಸೇರಿ ಸುಮಾರು 350 ಹಾಸಿಗೆ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ, ಬೃಂದಾವನ ಆಸ್ಪತ್ರೆಯವರು 75 ಹಾಸಿಗೆ ಕೊಡಲು ಸಿದ್ಧರಿದ್ದಾರೆ ಎಂದರು.</p>.<p>‘ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ ಒಬ್ಬ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ’ ಎಂದು ಹೇಳಿದರು.</p>.<p>‘ನರಸಿಂಹರಾಜ ಕ್ಷೇತ್ರದಲ್ಲಿ ವೈರಾಣುವಿನ ಸಾಂದ್ರತೆ ಹೆಚ್ಚಿದೆ. ಈ ಭಾಗದಲ್ಲಿ ಅತಿ ಹೆಚ್ಚು ಸೋಂಕಿತರಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕ್ಷೇತ್ರದ ಜನರ ರಕ್ಷಣೆಗಾಗಿ ಈ ಕ್ರಮ ಕೈಗೊಂಡಿದ್ದೇವೆ. ಅಪಪ್ರಚಾರ ಮಾಡುವುದಾಗಲಿ, ಹಿಂಜರಿಯುವುದಾಗಲಿ ಮಾಡಬಾರದು. ಜನರು ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಮೈಸೂರಿಗೆ 3,000 ರಿಂದ 3,500 ರ್ಯಾಪಿಡ್ ಆ್ಯಂಟಿಜೆನ್ ಕಿಟ್ಗಳು ಬೇಕು ಎಂದು ರಾಜ್ಯ ಸರ್ಕಾರವನ್ನು ಕೇಳಿದ್ದೇವೆ. ಕಿಟ್ಗಳನ್ನು ಸದ್ಯದಲ್ಲೇ ಕಳುಹಿಸಿ ಕೊಡಲಿದ್ದಾರೆ’ ಎಂದು ತಿಳಿಸಿದರು.</p>.<p>ನರಸಿಂಹರಾಜ ಕ್ಷೇತ್ರದ ಜವಾಬ್ದಾರಿಯನ್ನು ಸಂಸದರಿಗೆ ವಹಿಸಿರುವುದನ್ನು ಪ್ರಶ್ನೆ ಮಾಡಿರುವ ಕಾಂಗ್ರೆಸ್ ಮುಖಂಡ ವಾಸು ಅವರಿಗೆ ತಿರುಗೇಟು ನೀಡಿದ ಪ್ರತಾಸಸಿಂಹ, ‘ಕೋವಿಡ್ ಪ್ರಾರಂಭದಿಂದಲೂ ಈ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಯಾವುದೇ ಸಭೆಗೆ ಬಂದಿಲ್ಲ. ಸೋಂಕಿತರಿಗೆ ಹಾಸಿಗೆ ಕೊಟ್ಟು, ಆಹಾರ ಕೊಟ್ಟರೆ ಆಗುವುದಿಲ್ಲ.ಈ ರೀತಿಯ ವ್ಯರ್ಥ ಪ್ರಲಾಪನೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ’ ಎಂದರು.</p>.<p>‘ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ತನ್ವೀರ್ ಸೇಠ್ ಅವರು ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ, ನರಸಿಂಹರಾಜ ಕ್ಷೇತ್ರದ ಕೋವಿಡ್ ಉಸ್ತುವಾರಿಯನ್ನು ನನಗೆ ನೀಡಲಾಗಿದೆ. ಹೀಗಾಗಿ, ಈ ಭಾಗದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ’ ಎಂದು ನುಡಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲೆಸ್ಲಿ ಮೊರಾಸ್, ಆಸ್ಪತ್ರೆಯ ಆಡಳಿತಾಧಿಕಾರಿ ಸಂಜಯ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಸೇಂಟ್ ಜೋಸೆಫ್ ಆಸ್ಪತ್ರೆ, ನಾರಾಯಣ ಆಸ್ಪತ್ರೆ ಹಾಗೂ ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲಾಗಿದೆ.</p>.<p>ಸಂಸದ ಪ್ರತಾಪಸಿಂಹ ಅವರು ಸೋಮವಾರ ಈ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸೋಂಕಿತರ ಚಿಕಿತ್ಸೆಗಾಗಿ ಅಗತ್ಯ ಸಂದರ್ಭದಲ್ಲಿ ಹಾಸಿಗೆ ದೊರಕಿಸಿಕೊಡುವುದಾಗಿ ಈ ಮೂರೂ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.</p>.<p>ಖಾಸಗಿ ಆಸ್ಪತ್ರೆಗಳವರು ‘ಮಹಾನ್’ ಸಂಘಟನೆ ಮಾಡಿಕೊಂಡಿದ್ದಾರೆ. ಅದರಡಿ ವಿಕ್ರಂ ಆಸ್ಪತ್ರೆ, ಬಿ.ಎಂ.ಆಸ್ಪತ್ರೆ, ಸೇಂಟ್ ಜೋಸೆಫ್ ಆಸ್ಪತ್ರೆ, ನಾರಾಯಣ ಆಸ್ಪತ್ರೆ ಸೇರಿ ಸುಮಾರು 350 ಹಾಸಿಗೆ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ, ಬೃಂದಾವನ ಆಸ್ಪತ್ರೆಯವರು 75 ಹಾಸಿಗೆ ಕೊಡಲು ಸಿದ್ಧರಿದ್ದಾರೆ ಎಂದರು.</p>.<p>‘ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ ಒಬ್ಬ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ’ ಎಂದು ಹೇಳಿದರು.</p>.<p>‘ನರಸಿಂಹರಾಜ ಕ್ಷೇತ್ರದಲ್ಲಿ ವೈರಾಣುವಿನ ಸಾಂದ್ರತೆ ಹೆಚ್ಚಿದೆ. ಈ ಭಾಗದಲ್ಲಿ ಅತಿ ಹೆಚ್ಚು ಸೋಂಕಿತರಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕ್ಷೇತ್ರದ ಜನರ ರಕ್ಷಣೆಗಾಗಿ ಈ ಕ್ರಮ ಕೈಗೊಂಡಿದ್ದೇವೆ. ಅಪಪ್ರಚಾರ ಮಾಡುವುದಾಗಲಿ, ಹಿಂಜರಿಯುವುದಾಗಲಿ ಮಾಡಬಾರದು. ಜನರು ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಮೈಸೂರಿಗೆ 3,000 ರಿಂದ 3,500 ರ್ಯಾಪಿಡ್ ಆ್ಯಂಟಿಜೆನ್ ಕಿಟ್ಗಳು ಬೇಕು ಎಂದು ರಾಜ್ಯ ಸರ್ಕಾರವನ್ನು ಕೇಳಿದ್ದೇವೆ. ಕಿಟ್ಗಳನ್ನು ಸದ್ಯದಲ್ಲೇ ಕಳುಹಿಸಿ ಕೊಡಲಿದ್ದಾರೆ’ ಎಂದು ತಿಳಿಸಿದರು.</p>.<p>ನರಸಿಂಹರಾಜ ಕ್ಷೇತ್ರದ ಜವಾಬ್ದಾರಿಯನ್ನು ಸಂಸದರಿಗೆ ವಹಿಸಿರುವುದನ್ನು ಪ್ರಶ್ನೆ ಮಾಡಿರುವ ಕಾಂಗ್ರೆಸ್ ಮುಖಂಡ ವಾಸು ಅವರಿಗೆ ತಿರುಗೇಟು ನೀಡಿದ ಪ್ರತಾಸಸಿಂಹ, ‘ಕೋವಿಡ್ ಪ್ರಾರಂಭದಿಂದಲೂ ಈ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಯಾವುದೇ ಸಭೆಗೆ ಬಂದಿಲ್ಲ. ಸೋಂಕಿತರಿಗೆ ಹಾಸಿಗೆ ಕೊಟ್ಟು, ಆಹಾರ ಕೊಟ್ಟರೆ ಆಗುವುದಿಲ್ಲ.ಈ ರೀತಿಯ ವ್ಯರ್ಥ ಪ್ರಲಾಪನೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ’ ಎಂದರು.</p>.<p>‘ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ತನ್ವೀರ್ ಸೇಠ್ ಅವರು ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ, ನರಸಿಂಹರಾಜ ಕ್ಷೇತ್ರದ ಕೋವಿಡ್ ಉಸ್ತುವಾರಿಯನ್ನು ನನಗೆ ನೀಡಲಾಗಿದೆ. ಹೀಗಾಗಿ, ಈ ಭಾಗದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ’ ಎಂದು ನುಡಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲೆಸ್ಲಿ ಮೊರಾಸ್, ಆಸ್ಪತ್ರೆಯ ಆಡಳಿತಾಧಿಕಾರಿ ಸಂಜಯ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>