ತುಮಕೂರು: ರಾಷ್ಟ್ರೀಯ ಹೆದ್ದಾರಿ 206ರ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಕಡಿಮೆ ಮೊತ್ತದ ಪರಿಹಾರ ನಿಗದಿಗೊಳಿಸಿರುವುದನ್ನು ವಿರೋಧಿಸಿ ಹಾಗೂ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ತಿಪಟೂರು ತಾಲ್ಲೂಕು ಭೈರನಾಯಕನಹಳ್ಳಿ ಗ್ರಾಮಸ್ಥರು ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಲು ತೀರ್ಮಾನಿಸಿದ್ದಾರೆ.