ಮಂಜುನಾಥನಗರ ನಿವಾಸಿಯಾದ ಅವರು, ‘ಬ್ರಾಡ್ಕಾಸ್ಟಿಂಗ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್’ನಲ್ಲಿ (ಬಿಇಸಿಐಎಲ್) ಉಪ ವ್ಯವಸ್ಥಾಪಕರಾಗಿದ್ದಾರೆ. ಮಾರ್ಚ್ 6ರಂದು ಬೆಳಿಗ್ಗೆ 9.30ರ ಸುಮಾರಿಗೆ ನಿಲ್ದಾಣದಲ್ಲಿ ಬಿದ್ದು ಗಾಯಗೊಂಡಿದ್ದ ಅವರು, ಚಿಕಿತ್ಸೆ ಪಡೆದು ಮಂಗಳವಾರ ಠಾಣೆಯ ಮೆಟ್ಟಿಲೇರಿದ್ದಾರೆ. ಪೊಲೀಸರು ನಿರ್ಲಕ್ಷ್ಯ (ಐಪಿಸಿ 338) ಆರೋಪದಡಿ ಎಫ್ಐಆರ್ ದಾಖಲಿಸಿಕೊಂಡು, ಮೆಟ್ರೊ ಅಧಿಕಾರಿಗಳಿಂದ ವಿವರಣೆ ಕೇಳಿದ್ದಾರೆ.