ಪ್ರಕರಣವೇನು ?: ‘ವಕಟಿ ನಾರಾಯಣ ರೆಡ್ಡಿ ಹೈದರಾಬಾದ್ನಲ್ಲಿರುವ ವಿಎನ್ಆರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು. ಬೆಂಗಳೂರಿನ ಭಾರತೀಯ ಕೈಗಾರಿಕಾ ಹಣಕಾಸು ನಿಗಮದಿಂದ (ಐಎಫ್ಸಿಐ) 2014-15ರಲ್ಲಿ ₹190 ಕೋಟಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. ಆದರೆ, ಇನ್ನೂ ಆ ಸಾಲ ಮರುಪಾವತಿ ಮಾಡಿಲ್ಲ. ಇದರಿಂದ ಬೊಕ್ಕಸಕ್ಕೆ ₹ 205 ಕೋಟಿ ವಂಚನೆ ಆಗಿದೆ‘ ಎಂಬುದು ಸಿಬಿಐ ಆರೋಪ.