ಸ್ಥಳೀಯರ ಬಹುದಿನ ಬೇಡಿಕೆಯಾದ ನಾಯಂಡಹಳ್ಳಿ ರೈಲ್ವೆ ಕೆಳಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಇದರೊಂದಿಗೆ ಮಳೆ ಬಂದಾಗ ಅವಾಂತರ ಸೃಷ್ಟಿಯಾಗುತ್ತಿದ್ದರಿಂದ ಒಳ ಚರಂಡಿ ಕಾಮಗಾರಿಗೂ ಚಾಲನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸೋಮಣ್ಣ ಹಾಗೂ ತೇಜಸ್ವಿ ಸೂರ್ಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.