‘ಮನೆ ನಿರ್ಮಾಣದ ಪ್ರಗತಿಗೆ ಅನುಗುಣವಾಗಿ ನಾಲ್ಕು ಕಂತುಗಳಲ್ಲಿ ಹಣ ಬಿಡುಗಡೆ ಆಗುತ್ತದೆ. ಹಣ ಬಿಡುಗಡೆಗೆ ಯಾವ ಅಧಿಕಾರಿಗೂ ಹಣ ನೀಡುವ ಅಗತ್ಯವಿಲ್ಲ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಹಾಕಿದವರಿಗೆ ಸ್ವೀಕೃತಿ ಪತ್ರ ಸಿಗಲಿದೆ. ಹಣ ಮಂಜೂರು ಮಾಡಿಸುತ್ತೇವೆ ಎಂದು ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟರೆ ಕೊಡಬೇಡಿ’ ಎಂದು ಅರವಿಂದ ಬೆಲ್ಲದ ಮನವಿ ಮಾಡಿದರು.