ಸರ್ಕಾರದ ಪರ ವಕೀಲರು, ‘ಪ್ರತಿವಾದಿ ಆರೋಪಿ ಪ್ರಕರಣ ನಡೆದ ವೇಳೆ ಉಪಯೋಗಿಸಿದ್ದ ಮೊಬೈಲ್ ಫೋನ್ ಅನ್ನು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು ಎಂದು ಅಧೀನ ನ್ಯಾಯಾಲಯ ವಿಧಿಸಿರುವ ಜಾಮೀನು ನೀಡಿಕೆಯ ಷರತ್ತು ಉಲ್ಲಂಘಿಸಿದ್ದಾರೆ. ಹೀಗಾಗಿ ಜಾಮೀನು ರದ್ದುಗೊಳಿಸಬೇಕು’ ಎಂದು ಕೋರಿದರು. ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದ ಪೀಠ ವಿಚಾರಣೆ ಮುಂದೂಡಿದೆ. ಸಂತೋಷ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪನವರ ಆಪ್ತ ಸಹಾಯಕರಾಗಿದ್ದಾರೆ.