<p><strong>ಬೆಂಗಳೂರು:</strong> ‘ಎಚ್1ಎನ್1 ಪೀಡಿತರಿಗೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಎಚ್1ಎನ್1 ತೀವ್ರ ಸ್ವರೂಪದ್ದಾಗಿದ್ದರೆ, ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಐದು ಹಾಸಿಗೆಗಳ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.</p>.<p>‘ಪ್ರಜಾವಾಣಿ’ಯಲ್ಲಿ ಬುಧವಾರ ಪ್ರಕಟವಾದ ‘ಆಪತ್ತಿಗಿಲ್ಲ ಆರೋಗ್ಯ ಭಾಗ್ಯ’ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ, ‘ಆರೋಗ್ಯ ಕರ್ನಾಟಕ’ ಯೋಜನೆಯ ಸ್ಥಿತಿಗತಿಯ ಬಗ್ಗೆ ಅಧಿಕಾರಿಗಳ ಜತೆ ಬುಧವಾರ ಚರ್ಚಿಸಿದರು. ಈ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಆರೋಗ್ಯ ಇಲಾಖೆ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಂದಲೂ ಮುಖ್ಯಮಂತ್ರಿ ಮಾಹಿತಿ ಪಡೆದರು. ಬಳಿಕ ‘ಪ್ರಜಾವಾಣಿ’ಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು.</p>.<p>*ಯಶಸ್ವಿನಿ ಯೋಜನೆಯಡಿ ಲಭ್ಯವಿದ್ದ 823 ಚಿಕಿತ್ಸಾ ವಿಧಾನಗಳನ್ನು ‘ಆರೋಗ್ಯ ಕರ್ನಾಟಕ’ ಯೋಜನೆಗೆ ಸೇರಿಸಿ ಪ್ರಾಥಮಿಕ, ದ್ವಿತೀಯ, ಕ್ಲಿಷ್ಟಕರ ದ್ವಿತೀಯ ಹಾಗೂ ತೃತೀಯ ಹಂತದ ಚಿಕಿತ್ಸೆ ಒಳಗೊಂಡಂತೆ ಒಟ್ಟು 1,516 ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>* ಈವರೆಗೆ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ನಿರಾಕರಿಸಿರುವ ಬಗ್ಗೆ ದೂರುಗಳು ಬಂದಿಲ್ಲ. 90,000 ಫಲಾನುಭವಿಗಳಿಗೆ ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸೆ ಮತ್ತು 51,296 ಫಲಾನುಭವಿಗಳಿಗೆ ಕ್ಲಿಷ್ಟಕರ ದ್ವಿತೀಯ, ತೃತೀಯ ಮತ್ತು ತುರ್ತು ಚಿಕಿತ್ಸೆ ನೀಡಲಾಗಿದೆ.</p>.<p>* ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳು ₹ 2 ಲಕ್ಷಗಳವರೆಗೆ ಚಿಕಿತ್ಸೆ ಪಡೆಯಬಹುದು. ಹೊಸದಾಗಿ ಸಂಯೋಜಿತ ‘ಆಯುಷ್ಮಾನ್ ಭಾರತ್’ ಮತ್ತು ‘ಆರೋಗ್ಯ ಕರ್ನಾಟಕ’ ಯೋಜನೆಯಡಿ ₹ 5 ಲಕ್ಷಗಳವರೆಗೆ ಚಿಕಿತ್ಸೆ ಪಡೆಯಬಹುದು.</p>.<p>* 531 ಖಾಸಗಿ ಸೂಪರ್ ಸ್ಪೆಷಾಲಿಟಿ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ 385 ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು ನೋಂದಾಯಿಸಲಾಗಿದೆ. ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಅಥವಾ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ 1,614 ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಪಡೆಯಬಹುದು.</p>.<p>* ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಇಲ್ಲದ 169 ತುರ್ತು ಚಿಕಿತ್ಸಾ ವಿಧಾನಗಳಿಗೆ ನೇರವಾಗಿ ಸಾರ್ವಜನಿಕ ಆರೋಗ್ಯ ಕೇಂದ್ರ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಹೋಗಬಹುದು.</p>.<p>* ವೆಂಟಿಲೇಟರ್ ಅವಶ್ಯಕತೆ ಇದ್ದರೆ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕ ಆಸ್ಪತ್ರೆಗಳಲ್ಲೂ ಪ್ರತ್ಯೇಕ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಚ್1ಎನ್1 ಪೀಡಿತರಿಗೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಎಚ್1ಎನ್1 ತೀವ್ರ ಸ್ವರೂಪದ್ದಾಗಿದ್ದರೆ, ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಐದು ಹಾಸಿಗೆಗಳ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.</p>.<p>‘ಪ್ರಜಾವಾಣಿ’ಯಲ್ಲಿ ಬುಧವಾರ ಪ್ರಕಟವಾದ ‘ಆಪತ್ತಿಗಿಲ್ಲ ಆರೋಗ್ಯ ಭಾಗ್ಯ’ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ, ‘ಆರೋಗ್ಯ ಕರ್ನಾಟಕ’ ಯೋಜನೆಯ ಸ್ಥಿತಿಗತಿಯ ಬಗ್ಗೆ ಅಧಿಕಾರಿಗಳ ಜತೆ ಬುಧವಾರ ಚರ್ಚಿಸಿದರು. ಈ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಆರೋಗ್ಯ ಇಲಾಖೆ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಂದಲೂ ಮುಖ್ಯಮಂತ್ರಿ ಮಾಹಿತಿ ಪಡೆದರು. ಬಳಿಕ ‘ಪ್ರಜಾವಾಣಿ’ಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು.</p>.<p>*ಯಶಸ್ವಿನಿ ಯೋಜನೆಯಡಿ ಲಭ್ಯವಿದ್ದ 823 ಚಿಕಿತ್ಸಾ ವಿಧಾನಗಳನ್ನು ‘ಆರೋಗ್ಯ ಕರ್ನಾಟಕ’ ಯೋಜನೆಗೆ ಸೇರಿಸಿ ಪ್ರಾಥಮಿಕ, ದ್ವಿತೀಯ, ಕ್ಲಿಷ್ಟಕರ ದ್ವಿತೀಯ ಹಾಗೂ ತೃತೀಯ ಹಂತದ ಚಿಕಿತ್ಸೆ ಒಳಗೊಂಡಂತೆ ಒಟ್ಟು 1,516 ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>* ಈವರೆಗೆ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ನಿರಾಕರಿಸಿರುವ ಬಗ್ಗೆ ದೂರುಗಳು ಬಂದಿಲ್ಲ. 90,000 ಫಲಾನುಭವಿಗಳಿಗೆ ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸೆ ಮತ್ತು 51,296 ಫಲಾನುಭವಿಗಳಿಗೆ ಕ್ಲಿಷ್ಟಕರ ದ್ವಿತೀಯ, ತೃತೀಯ ಮತ್ತು ತುರ್ತು ಚಿಕಿತ್ಸೆ ನೀಡಲಾಗಿದೆ.</p>.<p>* ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳು ₹ 2 ಲಕ್ಷಗಳವರೆಗೆ ಚಿಕಿತ್ಸೆ ಪಡೆಯಬಹುದು. ಹೊಸದಾಗಿ ಸಂಯೋಜಿತ ‘ಆಯುಷ್ಮಾನ್ ಭಾರತ್’ ಮತ್ತು ‘ಆರೋಗ್ಯ ಕರ್ನಾಟಕ’ ಯೋಜನೆಯಡಿ ₹ 5 ಲಕ್ಷಗಳವರೆಗೆ ಚಿಕಿತ್ಸೆ ಪಡೆಯಬಹುದು.</p>.<p>* 531 ಖಾಸಗಿ ಸೂಪರ್ ಸ್ಪೆಷಾಲಿಟಿ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ 385 ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು ನೋಂದಾಯಿಸಲಾಗಿದೆ. ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಅಥವಾ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ 1,614 ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಪಡೆಯಬಹುದು.</p>.<p>* ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಇಲ್ಲದ 169 ತುರ್ತು ಚಿಕಿತ್ಸಾ ವಿಧಾನಗಳಿಗೆ ನೇರವಾಗಿ ಸಾರ್ವಜನಿಕ ಆರೋಗ್ಯ ಕೇಂದ್ರ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಹೋಗಬಹುದು.</p>.<p>* ವೆಂಟಿಲೇಟರ್ ಅವಶ್ಯಕತೆ ಇದ್ದರೆ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕ ಆಸ್ಪತ್ರೆಗಳಲ್ಲೂ ಪ್ರತ್ಯೇಕ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>