‘ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹೊಸ ವರ್ಷಾಚರಣೆ ವೇಳೆ ಯಾವುದಾದರೂ ಅಹಿತಕರ ಘಟನೆ ಕಂಡುಬಂದರೆ, ಬಜರಂಗದಳ ಸಂಘಟನೆಯವರು ಪೊಲೀಸರಿಗೆ ಮಾಹಿತಿ ನೀಡಬೇಕು. ಅದನ್ನು ಬಿಟ್ಟು, ತಾವೇ ದಾಳಿ ನಡೆಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಟಿ. ಸುನೀಲ್ಕುಮಾರ್ ಎಚ್ಚರಿಸಿದರು.