ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಾಸೀಟ್‌ ಉದ್ಯಾನ ‘ಅಧ್ವಾನ’: ಆಕ್ರೋಶ

ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
Last Updated 6 ಮೇ 2019, 13:03 IST
ಅಕ್ಷರ ಗಾತ್ರ

ಮಡಿಕೇರಿ: ‘ನೆಹರೂ ಉದ್ಯಾನ ನಿರ್ಮಾಣ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದ್ದು ಅದರ ನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ನೆಹರೂ ಮಂಟಪವನ್ನು ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಭೆಯಲ್ಲಿ ರಾಜಾಸೀಟು ಅಭಿವೃದ್ಧಿ ಸಮಿತಿಯೇ ನೆಹರು ಉದ್ಯಾನ ನಿರ್ವಹಣೆ ಮಾಡಲು ತೀರ್ಮಾನಿಸಲಾಯಿತು.

ನೆಹರೂ ಉದ್ಯಾನಕ್ಕೆ ಬೆಳಿಗ್ಗೆ 6ರಿಂದ ಸಂಜೆ 7ರ ತನಕ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಉದ್ಯಾನದಲ್ಲಿ ಕುಡಿಯುವ ನೀರು ಒದಗಿಸುವುದು, ರಕ್ಷಕರನ್ನು ನಿಯೋಜಿಸುವುದು ಮತ್ತಿತರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿ.ಸಿ ಸೂಚಿಸಿದರು.

ರಾಜಾಸೀಟು ಉದ್ಯಾನವನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದಕ್ಕೆ ಜಿಲ್ಲಾಧಿಕಾರಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಮವಸ್ತ್ರದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ರಕ್ಷಕರನ್ನು ನಿಯೋಜಿಸಿಲ್ಲ ಎಂದು ತೋಟಗಾರಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜಾಸೀಟಿನಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನಿಯೋಜನೆ ಸಂಬಂಧ ಟೆಂಡರ್ ಆಹ್ವಾನಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ದೇವಕಿ, ರಾಜಾಸೀಟು ಹಾಗೂ ಉದ್ಯಾನ ಆಗಬೇಕಿರುವ ಕಾರ್ಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್, ಪೌರಾಯುಕ್ತ ಎಂ.ಎಲ್.ರಮೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕದ ತಮ್ಮಯ್ಯ, ತೋಟಗಾರಿಕೆ ಇಲಾಖೆ ತಾಂತ್ರಿಕ ಸಹಾಯಕ ಗುರುರಾಜ್, ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ರಾಘವೇಂದ್ರ, ರಾಜಾಸೀಟು ಉದ್ಯಾನ ಸಿಬ್ಬಂದಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT