<p><strong>ಮಡಿಕೇರಿ: </strong>ನಗರದ ಕಾವೇರಿ ಹಾಲ್ನಲ್ಲಿ ಸಹಮತ ವೇದಿಕೆ ಕೊಡಗು ಘಟಕದ ವತಿಯಿಂದ ಆ.5ರಂದು ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ನಡೆಯಲಿದೆ ಎಂದು ಸಹಮತ ವೇದಿಕೆ ಅಧ್ಯಕ್ಷ ಟಿ.ಪಿ.ರಮೇಶ್ ಮಾಹಿತಿ ನೀಡಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘21ನೇ ಶತಮಾನದಲ್ಲಿರುವ ನಾವೆಲ್ಲರೂ ಜಾತಿ, ಧರ್ಮಗಳ ಹೆಸರಿನಲ್ಲಿ ಮನುಷ್ಯ ಕುಲ ತನ್ನದೇ ಸಹಜೀವಿಗಳಿಂದ ದೂರ ಸರಿದು ಒಡೆದು ಹೋಗುತ್ತಿದ್ದೇವೆ. ಈ ಆತಂಕದ ಹೊತ್ತಿನಲ್ಲಿ ನಾವೆಲ್ಲರೂ ಜೊತೆ ಜೊತೆಯಾಗಿಯೇ ಮುನ್ನಡೆಯಲು ತೊಡಗುತ್ತಿರುವ ಹೊಸದೊಂದು ಪ್ರಕ್ರಿಯೆ ಕಲ್ಯಾಣ ದತ್ತ ಕಾರ್ಯಕ್ರಮ’ ಎಂದರು.</p>.<p>ಅನುಭವ ಮಂಟಪದ ಮೂಲಕ ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ದುಡಿದ ವಿವಿಧ ಶರಣ, ಶರಣೆಯರ ವಚನಗಳು ಸಂದೇಶಗಳನ್ನು ಸಮಾಜದಲ್ಲಿ ಬಿತ್ತರಿಸುವ ಕೆಲಸ ನಡೆಯಲಿದೆ ಎಂದು ತಿಳಿಸಿದರು.</p>.<p>ಆಗಸ್ಟ್ 1ರಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಿಂದ ಆರಂಭಗೊಳ್ಳುವ ‘ಕಲ್ಯಾಣ ದತ್ತ’ ಆಂದೋಲನ ಕಾರ್ಯಕ್ರಮ ರಾಜ್ಯದ 30 ಜಿಲ್ಲೆಗಳಲ್ಲಿ 30 ದಿನಗಳ ಕಾಲ ಸಂಚರಿಸುತ್ತಿದ್ದು, ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ನೇತೃತ್ವ ವಹಿಸಿದ್ದಾರೆ ಎಂದು ಹೇಳಿದರು.</p>.<p>ಆ. 5ರ ಸೋಮವಾರ ಹಾಸನದಿಂದ ಮಡಿಕೇರಿಗೆ ಸ್ವಾಮೀಜಿ ಆಗಮಿಸಲಿದ್ದಾರೆ. ಸ್ತಬ್ಧಚಿತ್ರದ ರಥವನ್ನು ಮಹದೇವಪೇಟೆಯ ಬಸವೇಶ್ವರ ದೇವಾಲಯದ ಬಳಿ ಬರಮಾಡಿಕೊಳ್ಳಲಾಗುವುದು ಎಂದು ರಮೇಶ್ ಹೇಳಿದರು.</p>.<p>ಬೆಳಿಗ್ಗೆ 10.30ಕ್ಕೆ ಏರ್ಪಡಿಸಿರುವ ಸಾಮರಸ್ಯ ನಡಿಗೆಯಲ್ಲಿ ವಿವಿಧ ಧರ್ಮಗಳ ಗುರುಗಳು, ಜನಪ್ರತಿನಿಧಿಗಳು, ಸಂಘ– ಸಂಸ್ಥೆ ಸಮಾಜಗಳ ಪ್ರಮುಖರು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಲಾತಂಡಗಳು ಭಾಗವಹಿಸಲಿದ್ದು ಅಲ್ಲಿಂದ ಕಾವೇರಿ ಹಾಲ್ ತನಕ ಸಾಮರಸ್ಯ ನಡಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>12ಕ್ಕೆ ಸಾರ್ವಜನಿಕ ಸಮಾವೇಶ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ವಿದ್ಯಾಭವನದ ಅಧ್ಯಕ್ಷರು ಮತ್ತು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್.ದೇವಯ್ಯ ವಹಿಸುವರು. ‘ವಚನ ಚಳವಳಿ ವೈಶಿಷ್ಟ’ ಕುರಿತು ಚಿಂತಕ ಜಿ.ಎನ್. ನಾಗರಾಜ್ ಮತ್ತು ‘ಇಂದಿನ ಅಗತ್ಯ-ಬಸವ ತತ್ವ’ ಕುರಿತು ಚಿಂತಕ ಡಾ.ಕೆ. ಷರೀಫಾ ಉಪನ್ಯಾಸ ನೀಡಲಿದ್ದಾರೆ ಎಂದು ವಿವರಿಸಿದರು.</p>.<p>ಮಧ್ಯಾಹ್ನ 3.30ಕ್ಕೆ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನವಿದೆ. ಎಲ್ಲರನ್ನು ಒಗ್ಗೂಡಿಸಿ ಎಲ್ಲರೊಂದಿಗೆ ಸಾಮರಸ್ಯ ಬೆಸೆಯುವ ‘ಕಲ್ಯಾಣ ದತ್ತ’ ಕಾರ್ಯಕ್ರಮಕ್ಕೆ ಎಲ್ಲರೂ ಬಂದು ಯಶಸ್ವಿಗೊಳಿಸಬೇಕು ಎಂದು ಕೋರಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೇಬಿ ಮ್ಯಾಥ್ಯು, ಶಿವಪ್ಪ, ಮಹೇಶ್, ಟಿ.ಎಂ. ಮುದ್ದಯ್ಯ, ಮುನೀರ್ ಅಹಮ್ಮದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ನಗರದ ಕಾವೇರಿ ಹಾಲ್ನಲ್ಲಿ ಸಹಮತ ವೇದಿಕೆ ಕೊಡಗು ಘಟಕದ ವತಿಯಿಂದ ಆ.5ರಂದು ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ನಡೆಯಲಿದೆ ಎಂದು ಸಹಮತ ವೇದಿಕೆ ಅಧ್ಯಕ್ಷ ಟಿ.ಪಿ.ರಮೇಶ್ ಮಾಹಿತಿ ನೀಡಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘21ನೇ ಶತಮಾನದಲ್ಲಿರುವ ನಾವೆಲ್ಲರೂ ಜಾತಿ, ಧರ್ಮಗಳ ಹೆಸರಿನಲ್ಲಿ ಮನುಷ್ಯ ಕುಲ ತನ್ನದೇ ಸಹಜೀವಿಗಳಿಂದ ದೂರ ಸರಿದು ಒಡೆದು ಹೋಗುತ್ತಿದ್ದೇವೆ. ಈ ಆತಂಕದ ಹೊತ್ತಿನಲ್ಲಿ ನಾವೆಲ್ಲರೂ ಜೊತೆ ಜೊತೆಯಾಗಿಯೇ ಮುನ್ನಡೆಯಲು ತೊಡಗುತ್ತಿರುವ ಹೊಸದೊಂದು ಪ್ರಕ್ರಿಯೆ ಕಲ್ಯಾಣ ದತ್ತ ಕಾರ್ಯಕ್ರಮ’ ಎಂದರು.</p>.<p>ಅನುಭವ ಮಂಟಪದ ಮೂಲಕ ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ದುಡಿದ ವಿವಿಧ ಶರಣ, ಶರಣೆಯರ ವಚನಗಳು ಸಂದೇಶಗಳನ್ನು ಸಮಾಜದಲ್ಲಿ ಬಿತ್ತರಿಸುವ ಕೆಲಸ ನಡೆಯಲಿದೆ ಎಂದು ತಿಳಿಸಿದರು.</p>.<p>ಆಗಸ್ಟ್ 1ರಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಿಂದ ಆರಂಭಗೊಳ್ಳುವ ‘ಕಲ್ಯಾಣ ದತ್ತ’ ಆಂದೋಲನ ಕಾರ್ಯಕ್ರಮ ರಾಜ್ಯದ 30 ಜಿಲ್ಲೆಗಳಲ್ಲಿ 30 ದಿನಗಳ ಕಾಲ ಸಂಚರಿಸುತ್ತಿದ್ದು, ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ನೇತೃತ್ವ ವಹಿಸಿದ್ದಾರೆ ಎಂದು ಹೇಳಿದರು.</p>.<p>ಆ. 5ರ ಸೋಮವಾರ ಹಾಸನದಿಂದ ಮಡಿಕೇರಿಗೆ ಸ್ವಾಮೀಜಿ ಆಗಮಿಸಲಿದ್ದಾರೆ. ಸ್ತಬ್ಧಚಿತ್ರದ ರಥವನ್ನು ಮಹದೇವಪೇಟೆಯ ಬಸವೇಶ್ವರ ದೇವಾಲಯದ ಬಳಿ ಬರಮಾಡಿಕೊಳ್ಳಲಾಗುವುದು ಎಂದು ರಮೇಶ್ ಹೇಳಿದರು.</p>.<p>ಬೆಳಿಗ್ಗೆ 10.30ಕ್ಕೆ ಏರ್ಪಡಿಸಿರುವ ಸಾಮರಸ್ಯ ನಡಿಗೆಯಲ್ಲಿ ವಿವಿಧ ಧರ್ಮಗಳ ಗುರುಗಳು, ಜನಪ್ರತಿನಿಧಿಗಳು, ಸಂಘ– ಸಂಸ್ಥೆ ಸಮಾಜಗಳ ಪ್ರಮುಖರು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಲಾತಂಡಗಳು ಭಾಗವಹಿಸಲಿದ್ದು ಅಲ್ಲಿಂದ ಕಾವೇರಿ ಹಾಲ್ ತನಕ ಸಾಮರಸ್ಯ ನಡಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>12ಕ್ಕೆ ಸಾರ್ವಜನಿಕ ಸಮಾವೇಶ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ವಿದ್ಯಾಭವನದ ಅಧ್ಯಕ್ಷರು ಮತ್ತು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್.ದೇವಯ್ಯ ವಹಿಸುವರು. ‘ವಚನ ಚಳವಳಿ ವೈಶಿಷ್ಟ’ ಕುರಿತು ಚಿಂತಕ ಜಿ.ಎನ್. ನಾಗರಾಜ್ ಮತ್ತು ‘ಇಂದಿನ ಅಗತ್ಯ-ಬಸವ ತತ್ವ’ ಕುರಿತು ಚಿಂತಕ ಡಾ.ಕೆ. ಷರೀಫಾ ಉಪನ್ಯಾಸ ನೀಡಲಿದ್ದಾರೆ ಎಂದು ವಿವರಿಸಿದರು.</p>.<p>ಮಧ್ಯಾಹ್ನ 3.30ಕ್ಕೆ ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನವಿದೆ. ಎಲ್ಲರನ್ನು ಒಗ್ಗೂಡಿಸಿ ಎಲ್ಲರೊಂದಿಗೆ ಸಾಮರಸ್ಯ ಬೆಸೆಯುವ ‘ಕಲ್ಯಾಣ ದತ್ತ’ ಕಾರ್ಯಕ್ರಮಕ್ಕೆ ಎಲ್ಲರೂ ಬಂದು ಯಶಸ್ವಿಗೊಳಿಸಬೇಕು ಎಂದು ಕೋರಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೇಬಿ ಮ್ಯಾಥ್ಯು, ಶಿವಪ್ಪ, ಮಹೇಶ್, ಟಿ.ಎಂ. ಮುದ್ದಯ್ಯ, ಮುನೀರ್ ಅಹಮ್ಮದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>