ತುರ್ತು ಸಂದರ್ಭದಲ್ಲಿ ಬಂದಿದ್ದ ಜಗದೀಶ್, ಆಶ್ರಯ ಕಳೆದುಕೊಂಡ ಸಂತ್ರಸ್ತರ ಪಟ್ಟಿ ಸಿದ್ಧಪಡಿಸಿ, ಕರ್ಣಂಗೇರಿ, ಕೆ.ನಿಡುಗಣಿ, ಗಾಳಿಬೀಡು, ಮದೆ, ಸಂಪಾಜೆ, ಬಿಳಿಗೇರಿ, ಜಂಬೂರಿನಲ್ಲಿ ಪುನರ್ವಸತಿಗೆ ಜಾಗ ಗುರುತಿಸಿದ್ದರು. ಮನೆ ನಿರ್ಮಾಣ ಕಾಮಗಾರಿಗೆ ಚುರುಕು ಮುಟ್ಟಿಸುವ ಪ್ರಯತ್ನದಲ್ಲಿದ್ದರು. ಈಗ ಆ ಅಧಿಕಾರಿಯನ್ನೂ ವರ್ಗಾವಣೆ ಮಾಡಲಾಗಿದ್ದು ಕೆಲಸಗಳು ವಿಳಂಬವಾಗುತ್ತಿವೆ ಎಂದು ಸಂತ್ರಸ್ತರು ಹೇಳುತ್ತಾರೆ.