ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಗ್ರಾಮ ಪಂಚಾಯಿತಿಗಳನ್ನು ತಾಲ್ಲೂಕಿಗೆ ಸೇರಿಸುವಂತೆ ಆಗ್ರಹಿಸಿ ಮನವಿ

Last Updated 12 ನವೆಂಬರ್ 2019, 16:23 IST
ಅಕ್ಷರ ಗಾತ್ರ

ಸೋಮವಾರಪೇಟೆ: ನೆರೆಯ ಹಾಸನ ಜಿಲ್ಲೆ, ಸಕಲೇಶಪುರದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಸೋಮವಾರಪೇಟೆ ತಾಲ್ಲೂಕಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರಿಗೆ ಮನವಿ ಸಲ್ಲಿಸಿದರು.

ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿದ ಬೆಳೆಗಾರರ ಸಂಘದ ಅಧ್ಯಕ್ಷ ಆರ್.ಪಿ. ಲಕ್ಷ್ಮಣ, ಮಲೆನಾಡು ಹೋರಾಟ ಸಮಿತಿ ಕಾರ್ಯದರ್ಶಿ ಬಸಪ್ಪ, ಪ್ರಮುಖರಾದ ಕೆ.ಬಿ. ಜಯಣ್ಣ ಸೇರಿದಂತೆ ಇತರರು, ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಕ್ಕೆ ತೆರಳಲು ಅನಾನುಕೂಲವಾಗುತ್ತಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿಗೆ ಹೊಂದಿಕೊಂಡಂತೆ ಇರುವ ಚಂಗಡಹಳ್ಳಿ, ವಣಗೂರು, ಉಚ್ಚಂಗಿ ಮತ್ತು ಹೊಸೂರು ಸೇರಿದಂತೆ 4 ಗ್ರಾ.ಪಂ.ಗಳನ್ನು ಒಳಪಡಿಸಲು ಆಡಳಿತಾತ್ಮಕ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT