ಕ್ಷೇತ್ರದ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಹೆಸರನ್ನೇ ಬಿಜೆಪಿ ರಾಜ್ಯ ಘಟಕ ಶಿಫಾರಸು ಮಾಡಿದೆ. ಆದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಒಲ್ಲೆ ಎನ್ನುತ್ತಿದ್ದಾರೆ. ಬದಲಾಗಿ ಮಗಳಿಗೆ ಟಿಕೆಟ್ ಕೊಟ್ಟರೆ ಶ್ರಮಿಸುವುದಾಗಿಯೂ ಹೇಳಿಕೊಂಡಿದ್ದಾರೆ. ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿರುವ ಬಿಜೆಪಿ ಹೈಕಮಾಂಡ್ ನಿಶಾ ಹೆಸರನ್ನು ಪರಿಗಣಿಸಿದೆ.