‘ಪ್ರಸಕ್ತ ವರ್ಷದ ನವೆಂಬರ್ ಅಂತ್ಯದವರೆಗೆ, ಕರ್ಕಶ ಹಾರ್ನ್ ಬಳಸಿದ್ದ 21,581 ಚಾಲಕರ ವಿರುದ್ಧ ಮೋಟರು ವಾಹನಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡಿದ್ದ 8,808 ಮಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಗರದ ಪ್ರತಿ ಠಾಣೆಯ ಸಿಬ್ಬಂದಿ, ಕರ್ಕಶ ಹಾರ್ನ್ ಹಾಗೂ ದೋಷಪೂರಿತ ಸೈಲೆನ್ಸರ್ ಪತ್ತೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಲಿದ್ದಾರೆ’ ಎಂದು ಹರಿಶೇಖರನ್ ತಿಳಿಸಿದ್ದಾರೆ.