‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುತ್ವಕ್ಕೆ ಆದ್ಯತೆ ನೀಡಬೇಕು. ಒಂದು ದೇಶ– ಒಂದು ಚುನಾವಣೆ ಜಾರಿ ಮಾಡಿದಲ್ಲಿ ಆಡಳಿತ ಪಕ್ಷಕ್ಕೆ ವರದಾನವಾಗಲಿದೆ. ಹಾಗಾಗಿ, ಈ ಪ್ರಸ್ತಾವವನ್ನು ಕೈಬಿಡಬೇಕು. ಅದೇ ರೀತಿ, ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ತಿದ್ದುಪಡಿ ಮಸೂದೆಯನ್ನು (ಎನ್ಆರ್ಸಿ) ದೇಶದ ಎಲ್ಲೆಡೆ ಜಾರಿಗೆ ತರುವ ಹಿಂದೆ ರಾಜಕೀಯ ಕುತಂತ್ರ ಅಡಗಿದೆ. ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಸಂಚು ಇದಾಗಿದೆ’ ಎಂದು ಅವರು ತಿಳಿಸಿದರು.