ಸಂಘಗಳು ಆರಂಭವಾಗಿ 125 ವರ್ಷಗಳು ಕಳೆದರೂ ನೌಕರರಿಗೆ ಸೇವಾ ಭದ್ರತೆಯೇ ಇಲ್ಲದಾಗಿದೆ. ಯಾವುದೇ ಸೌಲಭ್ಯಗಳಿಲ್ಲದೆ ನಿವೃತ್ತಿ ಹೊಂದಬೇಕಾದ ಪರಿಸ್ಥಿತಿ ಇದೆ. ರೈತರ ಅಭಿವೃದ್ಧಿಗಾಗಿ ಹಗಲು ರಾತ್ರಿ ದುಡಿಯುತ್ತಿರುವ ನೌಕರರನ್ನು ನಿರ್ಲಕ್ಷಿಸಲಾಗಿದೆ. ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನಾ ಆಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.