ಬೆಂಗಳೂರು: ಕೇಂದ್ರ ಸರ್ಕಾರ ಉತ್ತಮ ಗುಣಮಟ್ಟದ ಬೆಲೆಗೆ ಕ್ವಿಂಟಲ್ಗೆ ₹1,770 ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ರಾಜ್ಯ ಸರ್ಕಾರ ಅದಕ್ಕಿಂತಲೂ ಕಡಿಮೆ ದರ ನಿಗದಿ ಮಾಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ರಾಜ್ಯದಲ್ಲಿ ಭತ್ತದ ಬೆಲೆ ಕುಸಿದಿರುವುದರಿಂದ ರೈತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಪ್ರತಿ ಕ್ವಿಂಟಲ್ ಭತ್ತಕ್ಕೆ ₹1,600 ಬೆಂಬಲ ಬೆಲೆ ಪ್ರಕಟಿಸಿದರು.
ಮುಖ್ಯಮಂತ್ರಿ ಪ್ರಕಟಿಸಿರುವ ಬೆಂಬಲ ಬೆಲೆ ಕಡಿಮೆ ಎಂದು ದೂರಿರುವ ಯಡಿಯೂರಪ್ಪ,ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಜತೆ ಸಮಾಲೋಚನೆ ನಡೆಸಬೇಕು. ಕೇಂದ್ರ ನಿಗದಿ ಮಾಡಿರುವ ಬೆಂಬಲ ಬೆಲೆಗಿಂತ ಹೆಚ್ಚು ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಭತ್ತ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ಸಾಮಾನ್ಯ ಗುಣಮಟ್ಟದ ಭತ್ತಕ್ಕೆ ₹1,750, ರಾಗಿಗೆ ₹ 1,900ರಿಂದ ₹2,897ರವರೆಗೆ ಬೆಂಬಲ ಬೆಲೆ ಹೆಚ್ಚಿಸಿದೆ. ಶೇ 52ರಷ್ಟು ಬೆಂಬಲ ಬೆಲೆ ಏರಿಕೆ ಮಾಡಿದೆ ಎಂದರು.