<p><strong>ಬೆಂಗಳೂರು: </strong>‘ಅಕ್ರಮವಾಗಿ ನಗರದಲ್ಲಿ ನೆಲೆಸಿರುವ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ದಂಪತಿ ಬಗೆಗಿನ ವಿವರಗಳನ್ನು ಕೇಂದ್ರ ಗೃಹ ಇಲಾಖೆಯಿಂದ ಪಡೆದು ಕೋರ್ಟ್ಗೆ ಸಲ್ಲಿಸಲಾಗುವುದು’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ಪಾಕಿಸ್ತಾನದ ಕರಾಚಿ ಜಿಲ್ಲೆಯ ಚಕ್ರಫೋಟ್ ಜಿಲ್ಲೆಯ ಕಾಸೀಫ್ ಶಂಸುದ್ಧೀನ್ ಮತ್ತು ಪತ್ನಿ ಕಿರಾಣ್ ಗುಲಾಮ್ ಅಲಿ ಅವರು, ‘ನಮ್ಮ ಜೈಲು ಶಿಕ್ಷೆ ಅವಧಿ ಕಡಿತಗೊಳಿಸಬೇಕು’ ಎಂದು ಕೋರಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ನ್ಯಾಯಮೂರ್ತಿಗಳು. ‘ಅರ್ಜಿದಾರರನ್ನು ವೃಥಾ ಇಲ್ಲಿ ಜೈಲಿನಲ್ಲಿ ಇರಿಸಿಕೊಂಡು ಏಕೆ ಸತ್ಕಾರ ಮಾಡುತ್ತಿದ್ದೀರಿ. ಅವರನ್ನೇಕೆ ಅವರ ಸ್ವದೇಶಕ್ಕೆ ಕಳುಹಿಸಬಾರದು’ ಎಂದು ಪುನರುಚ್ಚರಿಸಿದರು.</p>.<p>ಇದಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಈ ಕುರಿತಂತೆ ಗೃಹ ಇಲಾಖೆಯಿಂದ ವಿವರ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ವಿಚಾರಣೆಯನ್ನು ಶುಕ್ರವಾರಕ್ಕೆ (ಏ.26) ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಅಕ್ರಮವಾಗಿ ನಗರದಲ್ಲಿ ನೆಲೆಸಿರುವ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ದಂಪತಿ ಬಗೆಗಿನ ವಿವರಗಳನ್ನು ಕೇಂದ್ರ ಗೃಹ ಇಲಾಖೆಯಿಂದ ಪಡೆದು ಕೋರ್ಟ್ಗೆ ಸಲ್ಲಿಸಲಾಗುವುದು’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ಪಾಕಿಸ್ತಾನದ ಕರಾಚಿ ಜಿಲ್ಲೆಯ ಚಕ್ರಫೋಟ್ ಜಿಲ್ಲೆಯ ಕಾಸೀಫ್ ಶಂಸುದ್ಧೀನ್ ಮತ್ತು ಪತ್ನಿ ಕಿರಾಣ್ ಗುಲಾಮ್ ಅಲಿ ಅವರು, ‘ನಮ್ಮ ಜೈಲು ಶಿಕ್ಷೆ ಅವಧಿ ಕಡಿತಗೊಳಿಸಬೇಕು’ ಎಂದು ಕೋರಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ನ್ಯಾಯಮೂರ್ತಿಗಳು. ‘ಅರ್ಜಿದಾರರನ್ನು ವೃಥಾ ಇಲ್ಲಿ ಜೈಲಿನಲ್ಲಿ ಇರಿಸಿಕೊಂಡು ಏಕೆ ಸತ್ಕಾರ ಮಾಡುತ್ತಿದ್ದೀರಿ. ಅವರನ್ನೇಕೆ ಅವರ ಸ್ವದೇಶಕ್ಕೆ ಕಳುಹಿಸಬಾರದು’ ಎಂದು ಪುನರುಚ್ಚರಿಸಿದರು.</p>.<p>ಇದಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಈ ಕುರಿತಂತೆ ಗೃಹ ಇಲಾಖೆಯಿಂದ ವಿವರ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ವಿಚಾರಣೆಯನ್ನು ಶುಕ್ರವಾರಕ್ಕೆ (ಏ.26) ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>